
ಬೊಮ್ಮಾಯಿ ಕ್ಯಾಬಿನೆಟ್ನಿಂದ ಆನಂದ್ ಸಿಂಗ್ ಔಟ್..?
- ಪ್ರಬಲ ಖಾತೆ ಸಿಗದಿದ್ದಕ್ಕೆ ಮುನಿಸುಭಾನುವಾರವೇ ಸಿಎಂಗೆ ರಾಜೀನಾಮೆ ಸಲ್ಲಿಕೆ?- ಬಿಎಸ್ವೈ ಬಳಿಗೆ ಬೊಮ್ಮಾಯಿ ದೌಡು, ಖಾತೆ ಬದಲಿಸ್ತಾರಾ, ವರಿಷ್ಠರಿಗೆ ಬಿಡ್ತಾರಾ?
ಬೆಂಗಳೂರು (ಆ. 11): ಕೇಳಿದ ಖಾತೆ ಕೊಡಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕಂಡು ಬರುತ್ತಿದೆ. ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ, ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಆನಂದ್ ಸಿಂಗ್ ಬೇಡಿಕೆಗೆ ಮಣಿದು ಖಾತೆ ಬದಲಿಸುತ್ತಾರಾ ಅಥವಾ ವರಿಷ್ಠರ ನಿರ್ಧಾರಕ್ಕೆ ಬಿಡುತ್ತಾರಾ ಎಂಬುದು ಕುತೂಹಲಕರವಾಗಿದೆ.
Add Asianetnews Kannada as a Preferred Source
