
ಹಿಂದೆ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿತ್ತು
ರಾಮನಗರ ಜಿಲ್ಲೆಯ ಹೆಸರನ್ನು 'ಬೆಂಗಳೂರು ದಕ್ಷಿಣ' ಎಂದು ಬದಲಾಯಿಸಲು ರಾಜ್ಯ ಸಚಿವ ಸಂಪುಟ ಮಹತ್ವದ ಒಪ್ಪಿಗೆ ನೀಡಿದೆ. ಈ ಹಿಂದೆ ಇದೇ ಪ್ರಸ್ತಾವನೆಗೆ ಅನುಮೋದನೆ ಪಡೆದು ಕೇಂದ್ರಕ್ಕೆ ಕಳುಹಿಸಲಾಗಿತ್ತಾದರೂ, ಕೇಂದ್ರ ಸರ್ಕಾರವು ರಾಜ್ಯದ ಈ ತೀರ್ಮಾನವನ್ನು ತಿರಸ್ಕರಿಸಿತ್ತು. ಆದಾಗ್ಯೂ, ಜಿಲ್ಲೆಗಳ ಹೆಸರು ಬದಲಾವಣೆಯು ರಾಜ್ಯದ ಪರಮಾಧಿಕಾರ ಎಂಬ ನಿಲುವಿನೊಂದಿಗೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಈ ಬೆಳವಣಿಗೆಯು ರಾಜಕೀಯ ಮತ್ತು ಆಡಳಿತಾತ್ಮಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಯನ್ನು ಹುಟ್ಟುಹಾಕಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared