Asianet Suvarna News Asianet Suvarna News

ಹೈಕಮಾಂಡ್ ಅಂಗಳದಲ್ಲಿ ನಾಯಕತ್ವ ಬದಲಾವಣೆ ಚೆಂಡು, ಮೋದಿ ಕೈಯಲ್ಲಿ ಬಿಎಸ್‌ವೈ ಭವಿಷ್ಯ..?

ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತಾರೂಢ ಬಿಜೆಪಿಯಲ್ಲಿ ಉದ್ಭವಿಸಿದ್ದ ಬಿಕ್ಕಟ್ಟು ಸದ್ಯಕ್ಕೆ ದೆಹಲಿಗೆ ಸ್ಥಳಾಂತರಗೊಂಡಿದೆ. 

ಬೆಂಗಳೂರು (ಜೂ. 20): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತಾರೂಢ ಬಿಜೆಪಿಯಲ್ಲಿ ಉದ್ಭವಿಸಿದ್ದ ಬಿಕ್ಕಟ್ಟು ಸದ್ಯಕ್ಕೆ ದೆಹಲಿಗೆ ಸ್ಥಳಾಂತರಗೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಮೂರು ದಿನಗಳ ಕಾಲ ಮಾಹಿತಿ ಸಂಗ್ರಹಿಸಿ ದೆಹಲಿಗೆ ವಾಪಸಾಗಿದ್ದಾರೆ.

ಬಿಎಸ್‌ವೈ ಮುಂದೆ ನಡೆಯಲ್ಲ ಹಕೀಕತ್ತು, ಘರ್ಜಿಸಿದವರೆಲ್ಲಾ ಗಪ್‌ಚುಪ್, ಸಿಎಂ 10 ತಾಕತ್ತುಗಳಿವು..!

ಶೀಘ್ರದಲ್ಲೇ ಅವರು ರಾಜ್ಯದಲ್ಲಿನ ವಿದ್ಯಮಾನಗಳ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ವಿವರಗಳನ್ನು ಒಳಗೊಂಡ ವರದಿಯೊಂದನ್ನು ಸಲ್ಲಿಸಲಿದ್ದಾರೆ. ಆ ಬಳಿಕ ವರಿಷ್ಠರು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ನಿರ್ಧಾರ ಸದ್ಯ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.