
ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು
ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ.
ಬೆಂಗಳೂರು,[ನ.06]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಶತ್ರು ಅಲ್ಲ. ಅವರು ನಮ್ಮ ರಾಜಕೀಯ ಎದುರಾಳಿ. ರಾಜಕೀಯದ ಚದುರಂಗದಾಟದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಸುದ್ದಿಯೊಂದನ್ನು ತೇಲಿಬಿಟ್ಟಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಮೂಲಕ ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಸದ್ಯದ ರಾಜ್ಯರಾಜಕಾರಣದಲ್ಲಿ ರಾಜಕೀಯ ಚಾಣಕ್ಯ ಎಂದೇ ಬಿಂಬಿತರಾಗಿರುವ ದೊಡ್ಡಗೌಡ್ರ ನಡೆ ತೀವ್ರ ಕುತೂಹಲ ಮೂಡಿಸಿದೆ.