Asianet Suvarna News Asianet Suvarna News

ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದ ದೊಡ್ಡಗೌಡ್ರು

ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. 

ಬೆಂಗಳೂರು,[ನ.06]: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ‌ ಶತ್ರು ಅಲ್ಲ. ಅವರು ನಮ್ಮ ರಾಜಕೀಯ ಎದುರಾಳಿ. ರಾಜಕೀಯದ ಚದುರಂಗದಾಟದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೊಸ ಸುದ್ದಿಯೊಂದನ್ನು ತೇಲಿಬಿಟ್ಟಿದ್ದಾರೆ.

ಈ ಮೂಲಕ ಬಿಜೆಪಿಯ ಬಗ್ಗೆ ಮೃದು ಧೋರಣೆ ಮಾತುಗಳನ್ನಾಡಿರುವ ದೇವೇಗೌಡ, ಚಾಣಕ್ಷ್ಯತನದ ಮೂಲಕ ಮತ್ತೊಮ್ಮೆ ಬಿಜೆಪಿ ನಾಯಕರ ಗಮನ ಸೆಳೆದಿದ್ದಾರೆ. ಸದ್ಯದ ರಾಜ್ಯರಾಜಕಾರಣದಲ್ಲಿ ರಾಜಕೀಯ ಚಾಣಕ್ಯ ಎಂದೇ ಬಿಂಬಿತರಾಗಿರುವ ದೊಡ್ಡಗೌಡ್ರ ನಡೆ ತೀವ್ರ ಕುತೂಹಲ ಮೂಡಿಸಿದೆ.  

Video Top Stories