Asianet Suvarna News Asianet Suvarna News

ಸಿಎಂ ಬದಲಾವಣೆ ಕೂಗಿನ ನಡುವೆ ಆಪ್ತರ ಜೊತೆ ಮೀಟಿಂಗ್, ಟಾಸ್ಕ್ ಜೊತೆ ಸಿದ್ದು ಎಚ್ಚರಿಕೆ!

ಸಿಎಂ ಬದಲಾವಣೆ ಚರ್ಚೆ ಅಂತ್ಯಗೊಳಿಸಲು ಸಿದ್ದರಾಮಯ್ಯ ಖಡಕ್ ಎಚ್ಚರಿಕೆ, ಡಿಕೆಶಿ ಸಿಎಂ ಆದರೆ ನಮ್ಮ ಬೆಂಬಲ ಎಂದು ಹೆಚ್‌ಡಿಕುಮಾರ್ ಸ್ವಾಮಿ ಮಾತಿಗೆ ಕಾಂಗ್ರೆಸ್ ಅಧ್ಯಕ್ಷರ ತಿರುಗೇಟು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಸಿಎಂ ಬದಲಾವಣೆ ಕೂಗು ಜೋರಾಗುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ 16 ಆಪ್ತ ಸಚಿವರ ಜೊತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಬದಲಾವಣೆ ಕೂಗು ಅಂತ್ಯಗೊಳಿಸಲು ಎಚ್ಚರಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ಕೂಗು ಬದಿಗಿಟ್ಟು ಲೋಕಸಭಾ ಚುನಾವಣೆಗೆ ಕೆಲಸ ಮಾಡುವಂತೆ ಸೂಚಿಸಿದ್ದಾರೆ. ನಿಮ್ಮ ನಿಮ್ಮ ಕ್ಷೇತ್ರದಲ್ಲಿನ ಅಭ್ಯರ್ಥಿಗಳು ಸೋಲು ಕಂಡರೆ ಸಚಿವ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಒಳಜಗಳವಾದರೆ ಕೇಂದ್ರದಲ್ಲಿ ಇಂಡಿ ಒಕ್ಕೂಟದಲ್ಲೂ ಅಸಮಾಧಾನ ಸ್ಫೋಟಗೊಂಡಿದೆ. ಈ ಬಾರಿ ಬಿಹಾರ ಸಿಎಂ ನಿತೀಶ್ ಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆ ಮೇಲೆ ಹೆಚ್ಚಿನ ಗಮನಕೇಂದ್ರೀಕರಿಸಿದೆ. ಇಂಡಿ ಒಕ್ಕೂಟವನ್ನು ತನಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದಿದ್ದಾರೆ