ಕಾಂಗ್ರೆಸ್ ಪಾಲಿಗೆ ತಲೆನೋವಾಯ್ತಾ ಕಮಿಷನ್ ಕಂಟಕ..? ಶುರುವಾಯ್ತು ರಣ ರಾಜಕಾರಣ !

ಸಿದ್ದರಾಮಯ್ಯ ಸರ್ಕಾರದ ಮುಂದೆ ಗುತ್ತಿಗೆದಾರರ ಭಾಗ್ಯದ ಬೇಡಿಕೆ!
ಕಮಿಷನ್ ವಿಚಾರದಲ್ಲಿ ಶುರುವಾಗಿದೆ ರಣರಣ ರಾಜಕಾರಣ..!
ಮಾತಲ್ಲೇ ಹೊಸ ಸರ್ಕಾರಕ್ಕೆ ಕ್ಲೀನ್ ಚಿಟ್ ಕೊಟ್ಟರಾ ಕೆಂಪಣ್ಣ..?

Share this Video
  • FB
  • Linkdin
  • Whatsapp

ಈ ಹಿಂದೆ ಬಿಜೆಪಿ(BJP) ಸರ್ಕಾರ ಇದ್ದಾಗ, 40 ಪರ್ಸಂಟ್ ಕಮಿಷನ್(Commission) ಅನ್ನೋ ಬಿರುಗಾಳಿ ಬೀಸಿತ್ತು. ಅದರ ಅಬ್ಬರಕ್ಕೆ ಸರ್ಕಾರ ಅಲುಗಾಡಿದ್ದಂತೂ ನಿಜ. ಅಂದು ಬಿಜೆಪಿ ಸರ್ಕಾರದ ವಿರುದ್ಧ, ಇಂದು ಆಡಳಿತ ನಡೆಸ್ತಾ ಇರೋ ಕಾಂಗ್ರೆಸ್ ಹೋರಾಟ ಮಾಡಿತ್ತು. ಆದ್ರೆ ಈಗ ನೋಡಿದ್ರೆ, ಆ ಕಮಿಷನ್ ಕಂಟಕ ಕಾಂಗ್ರೆಸ್ (Congress) ಕೊರಳಿಗೂ ಸುತ್ತಿಕೊಳ್ತಿದೆ ಅನ್ನೋ ಮಾತು ಕೇಳಿಬರ್ತಾ ಇದೆ. ಹೊಸದೊಂದು ಕೋಲಾಹಲ ಶುರುವಾಗಿದೆ. ಗುತ್ತಿಗೆದಾರರು ಆಡೋ ಒಂದೊಂದು ಮಾತೂ ಕೂಡ ರಾಜಕೀಯ ಚದುರಂಗದ ದಿಕ್ಕು ದೆಸೆ ಬದಲಾಯಿಸ್ತಾ ಇದೆ. ಅದರಲ್ಲೂ ಕಮಿಷನ್ ಆರೋಪದ ಕಹಾನಿಯಲ್ಲಿ, ಟ್ವಿಸ್ಟ್ ಮೇಲೆ ಟ್ವಿಸ್ಟ್ ಎದುರಾಗ್ತಾ ಇದೆ. ಕಮಿಷನ್ ಆರೋಪ ಅನ್ನೋ ತೂಫಾನ್ ಕಳೆದ ಸಲ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಬುಡವನ್ನೇ ಅಲುಗಾಡಿಸಿತ್ತು. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ ಅಂದ್ರೂ ತಪ್ಪಾಗಲಿಕ್ಕಿಲ್ಲ. ಅದೇ ತೂಫಾನ್, ಅದೇ ಸುನಾಮಿ ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸ್ತಿರೊ ಹಾಗೆ ಕಾಣ್ತಾ ಇದೆ.. ಸಿದ್ದರಾಮಯ್ಯನೋರ(Siddaramaiah) ಸರ್ಕಾರಕ್ಕೆ ಕಮಿಷನ್ ಕಂಟಕ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

Related Video