ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!
ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.
ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಖಷ್ಬೂ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದರು.
ಆರ್ ಆರ್ ನಗರದ ಕುರುಕ್ಷೇತ್ರಕ್ಕೆ ಸುಯೋಧನನ ಎಂಟ್ರಿ; ಹೇಗಿತ್ತು ನೋಡಿ ಪ್ರಚಾರ!
ದರ್ಶನ್ ತೆರೆದ ವಾಹನದಲ್ಲಿ ಹಲವು ಸ್ಥಳಗಳಲ್ಲಿ ಪ್ರಚಾರ ನಡೆಸಿದ್ದು, ಅವರನ್ನ ನೋಡಲು ಅಭಿಮಾನಿಗಳು ಮತ್ತು ಬೆಂಬಲಿಗರು ಮುಗಿ ಬಿದ್ದಿದ್ದರು. ಶುಕ್ರವಾರ ಈದ್ ಮಿಲಾದ್ ರಜೆ ಇದ್ದ ಕಾರಣ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇನ್ನು ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದು, ನಾನು ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.