Asianet Suvarna News Asianet Suvarna News

ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ತಂದ ಸದಾನಂದಗೌಡ, ಕಳ್ಳನ ಮನಸ್ಸು ಹುಳ್ಳುಳ್ಳುಗೆ ಎಂದ ಸಿದ್ದು

ಕಳ್ಳನ ಮನಸ್ಸು ಹುಳ್ಳುಳ್ಳುಗೆ..ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೊಂಡ್ರಂತೆ ಎಂದು ಡಿವಿ ಸದಾನಂದಗೌಡಗೆ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರು, (ಜುಲೈ.03): ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. 

ಕೇಂದ್ರ ಸಚಿವಗೂ ಸಿಡಿ ಭೀತಿ: ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ತಂದ ಸದಾನಂದಗೌಡ

ಇನ್ನು ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಕಳ್ಳನ ಮನಸ್ಸು ಹುಳ್ಳುಳ್ಳುಗೆ..ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೊಂಡ್ರಂತೆ ಎಂದು ಲೇವಡಿ ಮಾಡಿದ್ದಾರೆ.