
ಸಿದ್ದರಾಮಯ್ಯ ಕೋಳಿ ಸಾರು ತಿಂದಿಲ್ಲ: ಊಟ ಬಡಿಸಿದವರೇ ಕೊಟ್ರು ಸ್ಪಷ್ಟನೆ
ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ಮಡಿಕೇರಿ, (ಆಗಸ್ಟ್.21): ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗು ಪ್ರವಾಸದ ವೇಳೆ ಮಾಂಸ ಊಟ ಮಾಡಿ ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನುವ ಆರೋಪವನ್ನು ಬಿಜೆಪಿ ಮಾಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಧ್ಯಾಹ್ನ ನಾನ್ವೆಜ್ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?
ಇದನ್ನು ಕಾಂಗ್ರೆಸ್ ನಾಯಕರು ಅಲ್ಲೆಗೆಳೆದಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಸಿದ್ದರಾಮಯ್ಯನವರು ಮಾಂಸ ಊಟ ಮಾಡಿದ್ದಾರೋ? ಇಲ್ಲವೋ? ಎನ್ನುವ ಸ್ವತಃ ಊಟದ ವ್ಯವಸ್ಥೆ ಮಾಡಿಸಿದ್ದ ಕಾಂಗ್ರೆಸ್ ನಾಯಕಿ ವೀಣಾ ಅಚ್ಚಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.