
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ?: 'ಕೈ' ಎತ್ತಿ ಬೆಂಬಲ ಸೂಚಿಸಿದ ನಾಯಕರು
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಕೋಲಾರ ಜಿಲ್ಲಾ ಮುಖಂಡರು ಚರ್ಚೆ ಮಾಡಿದ್ದಾರೆ.
ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಇದೆ. ಬಾದಾಮಿಗೆ ಗುಡ್ ಬೈ ಹೇಳಿ ಅವರು, ಎಲ್ಲಿಂದ ಕಣಕ್ಕೆ ಇಳಿಯುತ್ತಾರೆ ಎಂಬ ಚರ್ಚೆ ನಡೆದಿದೆ. ಈ ನಡುವೆ ಕೋಲಾರದಿಂದಲೇ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ ಮಾಡಿದ್ದಾರೆ ಕೈ ನಾಯಕರು. ನಿನ್ನೆ ಈ ಕುರಿತು ಕೋಲಾರದಲ್ಲಿ ಕಾಂಗ್ರೆಸ್ ಸಭೆ ನಡೆಸಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕ ಶ್ರೀನಿವಾಸ ಗೌಡ ಎನ್.ಎಸ್ ನಾರಾಯಣಸ್ವಾಮಿ ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಕೈ ಎತ್ತಿ ಎಲ್ಲರೂ ಬೆಂಬಲ ಘೋಷಣೆ ಮಾಡಿದ್ದಾರೆ.
Add Asianetnews Kannada as a Preferred Source
