ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ಅಲ್ಲ: ಅನಂತ್ ಕುಮಾರ್ ಹೆಗಡೆಗೆ ಪ್ರದೀಪ್‌ ಈಶ್ವರ್‌ ಗುಡುಗು

ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ.14): ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ಅನಂತಕುಮಾರ್ ಹೆಗಡೆ ಮೈಂಡ್ ಯುವರ್ ಟಂಗ್, ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ? ಹಿಂದೂ ಧರ್ಮನ ನಿಮ್ಮ ಅಪ್ಪನ ಮನೆ ಆಸ್ತಿ ತರಹ ಆಡ್ತಿದ್ದೀರಲ್ಲವಾ? ನಾಲಗೆ ಕಂಟ್ರೋಲ್ ನಲ್ಲಿ ಇಟ್ಕೊಳ್ಳಿ ಹೆಗಡೆಯವರೇ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದಾರೆ. ಮನ್ ಕಿ ಬಾತ್ ಜೊತೆಗೆ ಕಾಮ್ ಕಿ ಬಾತ್ ಮಾತಾಡೋಣ ಬನ್ನಿ. ನಾವೂ ಹಿಂದೂ ಧರ್ಮದವರೇ, ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video