Asianet Suvarna News Asianet Suvarna News

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದು ಪುತ್ರ ತಿರುಗೇಟು

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎನ್ನುವ ಎಚ್‌ಡಿಕೆ ಹೇಳಿಕೆಗೆ ಸಿದ್ದರಾಂಯ್ಯನವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ವಿರೋಧ ಪಕ್ಷದ ಸ್ಥಾನ ತಗೊಂಡು ಏನ್ಮಾಡ್ಬೇಕು? ಅದೇನು ಸಿಎಂ ಸ್ಥಾನನಾ ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟರು.

ಮೈಸೂರು, (ಅ.12): ಪುಟ್ಕೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಸರ್ಕಾರವನ್ನೇ ತೆಗೆದ ಮಹಾನ್ ನಾಯಕ ಸಿದ್ದರಾಮಯ್ಯ. ನೀವು ನನ್ನ ಬಗ್ಗೆ ಮಾತನಾಡಬೇಡಿ. ಗೂಟದ ಕಾರಿಗಾಗಿ ನಿಮ್ಮ ಪಕ್ಷದ 23 ಶಾಸಕರನ್ನ ಬೀದಿಗೆ ತಂದವರು ನೀವು ಎಂದು ಕುಮಾರಸ್ವಾಮಿ  ಗಂಭೀರ ಆರೋಪ ಮಾಡಿದ್ದಾರೆ. 

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಇನ್ನು ಇದಕ್ಕೆ ಸಿದ್ದರಾಂಯ್ಯನವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ವಿರೋಧ ಪಕ್ಷದ ಸ್ಥಾನ ತಗೊಂಡು ಏನ್ಮಾಡ್ಬೇಕು? ಅದೇನು ಸಿಎಂ ಸ್ಥಾನನಾ ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟರು.

Video Top Stories