
'ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಅಂಥ ಕರಿಬೇಕಾ' ಸರ್ಕಾರಕ್ಕೆ ಸಿದ್ದು ದಾಖಲೆ ಪಂಚ್!
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುಡುಗು/ ಲೆಕ್ಕ ಕೊಡಿ ಎಂದು ಕೇಳಿದ ಕಾಂಗ್ರೆಸ್/ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ/ ಕೊರೋನಾ ವಸ್ತು ಖರೀದಿಯಲ್ಲಿ ಭಾರೀ ಅವ್ಯವಹಾರವಾಗಿದೆ.
ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Add Asianetnews Kannada as a Preferred Source

ಸಿಎಂ ಯಡಿಯೂರಪ್ಪಗೆ ಅಂದೇ ಪತ್ರ ಬರೆದಿದ್ದ ಸಿದ್ದರಾಮಯ್ಯ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅನೇಕ ವಿಚಾರಗಳನ್ನು ಹೇಳಿದ್ದಾರೆ. ಕೋವಿಡ್ ಉಪಕರಣಗಳನ್ನು ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು ಬೆಲೆ ನೀಡಿ ಖರೀದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.