Asianet Suvarna News Asianet Suvarna News

ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನುಡಿದ ಮನೆದೇವರು, 2 ಕಡೆ ಸ್ಪರ್ಧೆಗೆ ಸೂಚನೆ!

ಎರಡು ಕಡೆ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆದಿನಾಡು ಚಿಕ್ಕಮ್ಮದೇವಿ ಸೂಚನೆ, ಸಿಎಂ ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ, ಸ್ಯಾಂಟ್ರೋ ರವಿ ಬಂಧನಕ್ಕೂ ಅರಗ ಪ್ರವಾಸಕ್ಕೂ ಸಂಬಂಧವಿದೆಯಾ? ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಈಗಾಗಲೇ ಚರ್ಚೆಯಾಗುತ್ತಿದೆ. ಇದರ ನಡುವೆ ಸಿದ್ದರಾಮಯ್ಯ ಮನೆ ದೇವರು ಎರಡು ಕಡೆ ಸ್ಪರ್ಧೆ ಮಾಡುವಂತೆ ಆದಿನಾಡು ಚಿಕ್ಕಮ್ಮದೇವಿ ಆಜ್ಞೆ ಮಾಡಿದೆ. ಡಾ.ಯತೀಂದ್ರಗೆ ಈ ಸೂಚನೆ ನೀಡಲಾಗಿದೆ. ಮನದೇವರು ನೀಡಿದ ಸೂಚನೆ ಕುರಿತು ಆದಿನಾಡು ಚಿಕ್ಕಮ್ಮದೇವಿ ದೇಗುಲದ ಅರ್ಚಕ ಡಾ. ಲಿಂಗಣ್ಣ ಹಲವು ಮಾಹಿತಿ ಬಹಿರಂಗಪಡಿಸಿದ್ದಾರೆ.  ಇದೀಗ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇತ್ತ ಸ್ಯಾಂಟ್ರೋ ರವಿ ಬಂಧನ ರಾಜ್ಯದಲ್ಲಿ ಭಾರಿ ಸಂಚಲನ ಸಷ್ಟಿಸಿದೆ. ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಅಹಮ್ಮದಾಬಾದ್‌ನಲ್ಲಿ ಬಂಧಿಸಲಾಗಿದೆ. ಇತ್ತ ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಹಮ್ಮದಾಬಾದ್‌ನಲ್ಲಿದ್ದರು. ಗೃಹ ಸಚಿವರೇ ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಹೋಗಿದ್ದರು ಎಂದು ವಿಪಕ್ಷಗಳು ಆರೋಪಿಸಿದೆ.

Video Top Stories