
ಡಿಕೆ ಶಿವಕುಮಾರ್ಗೆ ಆಪ್ತನಿಗೆ ಸಿಬಿಐ ನೋಟಿಸ್, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ
ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.
ಬೆಂಗಳೂರು (ಆ.25) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.
Add Asianetnews Kannada as a Preferred Source

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?
2020 ಅಕ್ಟೋಬರ್ನಲ್ಲಿ ಡಿಕೆಶಿ ವಿರುದ್ಧ ಸಿಬಿಐ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದೀಗ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಸ್ ಓಪನ್ ಆಗಿದ್ದು, ಮೊದಲಿಗೆ ಡಿಕೆಶಿ ಆಪ್ತನಿಗೆ ನೋಟಿಸ್ ನೀಡಿದೆ. ಇದರಿಂದ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರು ಶಿವಕುಮಾರ್ಗೆ ಢವ ಢವ ಶುರುವಾಗಿದೆ.