ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

ಡಾ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ
ಡಾ.ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ
ಇವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ 
ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ 

Share this Video
  • FB
  • Linkdin
  • Whatsapp

ಸಂಸದ ಡಿ.ಕೆ.ಸುರೇಶ್‌ ಡಾ. ಮಂಜುನಾಥ್‌(Dr.CN Manjunath) ರಾಜಕೀಯ ಪ್ರವೇಶಕ್ಕೆ ಸ್ವಾಗತ ಕೋರಿದ್ದು, ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ(Devegowda) ಕುಟುಂಬದ ಮತ್ತೊಂದು ಭಾಗ. ಹಾಗಾಗಿ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ(BJP) ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಕಾಡುತ್ತಿದೆ. ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ನಿಮ್ಮನ್ನ ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ‌ ಇರಿ ಸಾಕು ಎಂದು ಡಿಕೆ ಸುರೇಶ್(DK Suresh) ಹೇಳಿದರು.

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ: Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

Related Video