Asianet Suvarna News Asianet Suvarna News

ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹತ್ತಿರವಾಗ್ತಿದ್ದಂತೆ ಪ್ರಚಾರ ಕಾವೇರುತ್ತಿದೆ. ಪ್ರಧಾನಿ ಮೋದಿ ರಾಯಚೂರು ಭೇಟಿಗೆ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಪ್ರವಾಹ, ಕೋವಿಡ್‌ ವೇಳೆಯಲ್ಲಿ ಮೋದಿ ರಾಜ್ಯಕ್ಕೆ ಬರಲಿಲ್ಲ. ಇನ್ನು, ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ. ಪ್ರಚಾರದಲ್ಲಿ ಬಿಡುವಿಲ್ಲದೆ ಇರುವುದರಿಂದ ನೆನಪಿನ ಶಕ್ತಿ ಕಡಿಮೆ ಆಗಿದೆ ಎಂದೂ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

Video Top Stories