ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್ಗೆ ಸುಧಾಕರ್ ಮನವಿ
ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್ ಯಾರು ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.
ಬೆಂಗಳೂರು. [ಜ.30]: ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್ ಯಾರು ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಹು ಈಸ್ ಹೀ, ಸುಧಾಕರ್ ಏನು ಚೀಫ್ ಮಿನಿಸ್ಟ್ರಾ..'? ವಿಶ್ವನಾಥ್ ಸಿಡಿಮಿಡಿ
ಮೈಸೂರಿನಲ್ಲಿ ಮಾತನಾಡಿದ ಅವರು, ಸುಧಾಕರ್ ನನ್ನ ಸ್ಪರ್ಧೆ ಬಗ್ಗೆ ಮಾತನಾಡಲು ಅವರು ಯಾರು ಎಂದು ಗರಂ ಆಗಿಯೇ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.