Asianet Suvarna News Asianet Suvarna News

ತವರು ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ: ಹಾವೇರಿಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ನಿರೀಕ್ಷೆ

ತವರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬೊಮ್ಮಾಯಿ
ಹಾವೇರಿಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಿಎಂ ಪ್ರಚಾರ
ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಲಿದೆ ಎಂದು ವಿಶ್ವಾಸ 

ಹಾವೇರಿ: ಸಿಎಂ ಬೊಮ್ಮಾಯಿ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.  ಈ ವೇಳೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಮನೆ ಮನೆಗೆ ನಳದ ವ್ಯವಸ್ಥೆ ಮೂಲಕ ನೀರನ್ನು ಪೂರೈಸುವ ಕಾರ್ಯವನ್ನು ಏಳೆಂಟು ತಿಂಗಳಲ್ಲಿ ಪೂರ್ತಿ ಮಾಡುತ್ತೇವೆ. ಹಾಗೆಯೇ ಇಲ್ಲಿನ ವ್ಯವಸಾಯ ಸಹಕಾರ ಸಂಘದ ಅಭಿವೃದ್ಧಿಗೆ ಹಣ ನೀಡಿದ್ದೇವೆ. ಈ ರೀತಿಯ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಬೇಕು. ಅದರಲ್ಲೂ ಯಾವಾಗೆಲ್ಲಾ ಬಿಜೆಪಿ ಸರ್ಕಾರ ಬರುತ್ತದೆಯೋ ಆವಾಗೆಲ್ಲಾ ಅಭಿವೃದ್ಧಿ ಕಾರ್ಯಗಳು ಜರುಗಿವೆ. ಈ ಬಾರಿ ಸಹ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆ ಸಂದರ್ಭದಲ್ಲಿ ಉಳಿದಿರುವ ಕೆಲಸಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದರು.

ಇದನ್ನೂ ವೀಕ್ಷಿಸಿ: ಶಿವನ ಕೊರಳಿನಲ್ಲಿರುವ ಹಾವಿನಂತೆ ನಾನು : ಮೋದಿ

Video Top Stories