ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ.21): ರಾಜಕಾರಣದಲ್ಲಿ ಮತ್ತೊಂದು ರೋಚಕ ಟ್ವಿಸ್ಟ್ ಲಭ್ಯವಾಗುತ್ತಿದೆ. ಈ ಸುದ್ದಿ ವಿಧಾನಸಭಾ ಚುನಾವಣೆಯ ರಾಜ್ಯ ರಾಜಕಾರಣವನ್ನೇ ಬದಲಿಸುತ್ತದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೂ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Add Asianetnews Kannada as a Preferred SourcegooglePreferred

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಮಗ ಗುರುಚರಣ್‌ ಅವರು ಮದ್ದೂರಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಕೇಳಿಬಂದಿತ್ತು. ಆದರೆ, ಸ್ವತಃ ಗುರುಚರಣ್‌ ಅವರೇ ಬೆಂಗಳೂರಿನ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ತೆರಳಿ ಮದ್ದೂರಿನಲ್ಲಿ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿಗೆ ಡಿ.ಕೆ. ಶಿವಕುಮಾರ್‌ ಧನಾತ್ಮಕವಾಗಿ ಸ್ಪಂದನೆ ಮಾಡಿದ್ದು, ಈ ಬಗ್ಗೆ ಚಿಂತನೆ ಮಾಡಿ ಶಿಘ್ರವೇ ತಿಳಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಡಿಕೆಶಿ ಕೂಡ ಕ್ಷೇತ್ರ ಬದಲಾವಣೆ ಮಾಡುವುದು ಸನ್ನಿಹಿತವಾದಲ್ಲಿ ಈಗಿನ ಅವರ ತವರು ಕ್ಷೇತ್ರ ಕನಕಪುರವನ್ನು ಬಿಟ್ಟು ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆಯೇ.? ಎಂಬ ಅನುಮಾನ ಕಾಡುತ್ತಿದೆ.

Related Video