2ನೇ ಬಾರಿಗೆ ವಿಧಾನಪರಿಷತ್ಗೆ ಆಯ್ಕೆಯಾದ ಶರವಣಗೆ ಅದ್ಧೂರಿ ಸನ್ಮಾನ
ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರಿಗೆ ಅಭಿನಂದನಾ ಸಮಾರಂಭ. ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶರವಣ ಅವರಿಗೆ ಅದ್ಧೂರಿಯಾಗಿ ಸನ್ಮಾನಿಸಲಾಯ್ತು.
ಬೆಂಗಳೂರು, (ಜೂನ್.23): ಜೆಡಿಎಸ್ ಮುಖಂಡ ಟಿ.ಎ.ಶರವಣ ಅವರಿಗೆ ಅಭಿನಂದನಾ ಸಮಾರಂಭ. ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶರವಣ ಅವರಿಗೆ ಅದ್ಧೂರಿಯಾಗಿ ಸನ್ಮಾನಿಸಲಾಯ್ತು.
ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ
ಇಂದು(ಗುರುವಾರ) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ವತಿಯಿಂದ ಟಿ.ಎ ಶರವಣ ಅವರಿಗೆ ಸನ್ಮಾನಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಎಚ್ಡಿ ಕುಮಾರಸ್ವಾಮಿ, ಶ್ರೀ ಸಚ್ಚಿದಾನಂದ ಸರಸ್ವತಿ ಶ್ರೀ, ಅವಧೂತ ನಿನಯ್ ಗುರೂಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ರು.