Asianet Suvarna News Asianet Suvarna News

ಬಳ್ಳಾರಿ ಗ್ರಾಮಾಂತರ: ಬಿಜೆಪಿ- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ, ಓರ್ವನಿಗೆ ಗಾಯ

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. 

 

ಬಳ್ಳಾರಿ: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಮಾರಾಮಾರಿ ನಡೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ ಮತದಾನದ ವೇಳೆ ಗಲಾಟೆ ನಡೆದಿದೆ.  ಈ ವೇಳೆ ಕಾಂಗ್ರೆಸ್‌ ಸ್ಥಳೀಯ ಮುಖಂಡ ಉಮೇಶ್ ಗೌಡರ ತಲೆಗೆ ಗಾಯವಾಗಿದೆ. ಇವರು ಇತ್ತೀಚೆಗೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಮತದಾನಕ್ಕೆ ತೆರಳುವ ವೇಳೆ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಈ ಗಲಾಟೆ ನಡೆದಿದೆ. ತಕ್ಷಣ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಬಂದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಕಾರ್ಯಕರ್ತರ ಜತೆ ಭೈರತಿ ಸುರೇಶ್‌ ವಾಗ್ವಾದ: ಕ್ಯೂ ತಪ್ಪಿಸಿ ಬಂದ ಬಿಜೆಪಿ ಅಭ್ಯರ್ಥಿಗೆ ಮತದಾರರ ತರಾಟೆ