Karnataka Politics ಈಶ್ವರಪ್ಪಗೆ ಸೆಟ್ಲ್‌ಮೆಂಟ್ ಮಾಡ್ತೀನಿ, ಡಿಕೆಶಿ ಸ್ಫೋಟಕ ಹೇಳಿಕೆ

ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.19): ರಾಷ್ಟ್ರದ್ರೋಹಿ ನಾನಲ್ಲ, ನೀನು. ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ ಮೇಲೆ ಹೊರಗಡೆ ಇರುವ ನೀನೇ ರಾಷ್ಟ್ರದ್ರೋಹಿ. ನೀನು ನನಗೆ ಏನೂ ಹೇಳಬೇಡ ಅಂತಾ ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಸಚಿವ ಈಶ್ವರಪ್ಪ ಏಕವಚನದಲ್ಲೇ ಬೈದಿದ್ದು, ಇದೀಗ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮ ಅಪ್ಪನ ಬಗ್ಗೆ ನೂರು ಬಾರಿ ಬೇಕಾದರೂ ಮಾತನಾಡಲಿ. ಈಶ್ವರಪ್ಪಗೆ ಸೆಟ್ಲ್‌ಮೆಂಡ್ ಮಾಡ್ತೀನಿ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ. 

Karnataka Politics: ಹರಕುಬಾಯಿ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ: ಡಿಕೆಶಿ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ದಿನಗಳು ಬರುತ್ತವೆ ಅಂತಾ ಕೆಲ ದಿನಗಳ ಹಿಂದಷ್ಟೇ ಈಶ್ವರಪ್ಪ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲಿ ಕೋಲಾಹಲ(Karnataka Assembly Session)ವನ್ನೇ ಸೃಷ್ಟಿಸಿತ್ತು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

Related Video