ಲೋಕಸಮರದ ಬಗ್ಗೆ ಬಹಿರಂಗವಾಗಿ ಆಸೆ ಬಿಚ್ಚಿಟ್ಟ ವಿ.ಸೋಮಣ್ಣ

ವಿಧಾನಸಭೆಯ ಸೋಲಿನಿಂದ ಕುಗ್ಗಿಹೋಗಿರುವ ಮಾಜಿ ವಸತಿ ಸಚಿವ ವಿ.ಸೋಮಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು.15): ವಿಧಾನಸಭೆಯ ಸೋಲಿನಿಂದ ಕುಗ್ಗಿಹೋಗಿರುವ ಮಾಜಿ ವಸತಿ ಸಚಿವ ವಿ.ಸೋಮಣ್ಣ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನನಗೆ ಸ್ಪರ್ಧಿಸುವ ಇಂಗಿತವಿದೆ ಎಂದು ಹೇಳೊಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಬಿಜೆಪಿಯು ಒಂದೇ ಸಮುದಾಯಕ್ಕೆ ಟಿಕೆಟ್‌ ನೀಡುತ್ತಿದೆ. ಈಗ ಬೇರೆ ಸಮುದಾಯಕ್ಕೆ ನೀಡಲಿ ಎಂದು ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಸಿದ ಸಭೆಯಲ್ಲಿ ತಮ್ಮ ಇಂಗಿತವನ್ನು ಬಿಚ್ಚಿಟ್ಟೊದ್ದಾರೆ. ಇದೇ ವೇಳೆ ಚಾಮರಾಜನಗರ ಸೋಲನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

Add Asianetnews Kannada as a Preferred SourcegooglePreferred

Related Video