Asianet Suvarna News Asianet Suvarna News

ಬಡವರ ಅಕ್ಕಿ ಮಾರಿಕೊಂಡ ಬಿಜೆಪಿ ಪ್ರಮುಖ ನಾಯಕ: ಸಿಎಂಗೆ ವಿಷ್ಯಾ ತಿಳಿಸಿದ ಡಿಕೆಶಿ

ಕೊರೋನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
 

ಬೆಂಗಳೂರು, (ಏ.24): ಕೊರೋನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆಶಿ, ಅಕ್ಕಿ ಗೋಲ್‌ಮಾಲ್ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆಯೇ ಇಲ್ಲವೋ ಎಂಬುದು ತಿಳಿದಿಲ್ಲ. ಹರಿಯಾಣದಿಂದ ಬಂದ ಅಕ್ಕಿಯನ್ನು ತಮಿಳುನಾಡಿನ ಹೊಸೂರು ವ್ಯಾಪಾರಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.

Video Top Stories