
ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್: ಕಟೀಲ್ ಹೇಳಿಕೆಗೆ ಬಿಜೆಪಿ ಸಮರ್ಥನೆ
* ರಾಹುಲ್ ಡ್ರಗ್ ಬಳಕೆ ಬಗ್ಗೆ ಪ್ರಸ್ತಾಪಿಸಿದ್ದ ಸುಬ್ರಮಣಿಯನ್ ಸ್ವಾಮಿ
* ಕಾಂಗ್ರೆಸ್ನವರು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ
* ಕಟೀಲ್ ಹೇಳಿಕೆಗೆ ಬಿಜೆಪಿ ನಾಯಕರ ಸಮರ್ಥನೆ
ಬೆಂಗಳೂರು(ಅ.20): 2001 ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನ ನೀಡಿದ್ದರು. ಅಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ಅನೇಕ ಪತ್ರಿಕೆಗಳಲ್ಲಿ ವರದಿಯಾಗಿತ್ತು. ರಾಹುಲ್ ಡ್ರಗ್ ಬಳಕೆ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಪ್ರಸ್ತಾಪಿಸಿದ್ದರು. ಈ ವರದಿಯನ್ನಾಧರಿಸಿ ಕಟೀಲ್ ಒಂದು ವಾಕ್ಯವನ್ನ ಹೇಳಿದ್ದರು. ಇದನ್ನು ಇಟಕೊಂಡು ಕಾಂಗ್ರೆಸ್ನವರು ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ಕಟೀಲ್ ಅವರ ಹೇಳಿಕೆಯನ್ನ ರಾಜ್ಯ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿಂದಗಿಯಲ್ಲಿ ಬಿಎಸ್ವೈ ಪ್ರಚಾರ, ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ಹೀಗೆ