ಅಧಿವೇಶನದಲ್ಲಿ ರಾಜ್ಯಪಾಲ ಭಾಷಣ: ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆಗೆ ಕ್ರಮ
ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.
ಬೆಂಗಳೂರು, (ಫೆ.17): ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡಿದರು.
ಬಿಎಸ್ವೈ ಸರ್ಕಾರದ ಮೊದಲ ಜಂಟಿ ಅಧಿವೇಶನ ಇಂದು!
ರಾಜ್ಯಪಾಲ ವಜೂಭಾಯಿ ವಾಲಾ ಅವರು ವರ್ಷದ ಮೊದಲ ಅಧಿವೇಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಹಿಂದಿಯಲ್ಲೇ ರಾಜ್ಯಪಾಲರ ಭಾಷಣ, ಪ್ರತಿಪಕ್ಷಗಳಿಂದ ವಿರೋಧ?
ಸರ್ಕಾರದ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳು, ಜನಪ್ರಿಯ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ 20 ಪುಟಗಳ ಸಂಕ್ಷಿಪ್ತ ಭಾಷಣವನ್ನು ರಾಜ್ಯಪಾಲರು ಹಿಂದಿಯಲ್ಲಿ ಓದಿದರು.