ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನುಡಿದಂತೆ ನಡೆದಿದ್ದಾರೆ. ನಾವು ಘೋಷಿಸಿದಂತೆ ಗ್ಯಾರಂಟಿಗಳನ್ನ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ ಈಡೇರಿಸುತ್ತಿದ್ದೇವೆ: ಲಕ್ಷ್ಮಿ ಹೆಬ್ಬಾಳ್ಕರ್ 

First Published Aug 30, 2023, 12:49 PM IST | Last Updated Aug 30, 2023, 12:50 PM IST

ಮೈಸೂರು(ಆ.30):  ಇಂತಹ ಕಾರ್ಯಕ್ರಮಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತದೆ. ಚಾಮುಂಡೇಶ್ವರಿ ಕೃಪೆಯಿಂದ ನಮಗೆ ಫಲ ಸಿಕ್ಕಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಇಂದು(ಬುಧವಾರ) ನಗರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನುಡಿದಂತೆ ನಡೆದಿದ್ದಾರೆ. ನಾವು ಘೋಷಿಸಿದಂತೆ ಗ್ಯಾರಂಟಿಗಳನ್ನ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ ಈಡೇರಿಸುತ್ತಿದ್ದೇವೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌