Asianet Suvarna News Asianet Suvarna News

ದೇಶದಲ್ಲಿ ಜಿಎಸ್‌ಟಿ ಬಂತು, ಈ ಸರ್ಕಾರದಲ್ಲಿ ವೈಎಸ್‌ಟಿ ಬಂದಿದೆ: ಕುಮಾರಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

First Published Jul 2, 2023, 2:43 PM IST | Last Updated Jul 2, 2023, 2:43 PM IST

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ವರ್ಗಾವಣೆ ಬಾಂಬ್‌ ಸಿಡಿಸಿದ್ದಾರೆ. ಯತೀಂದ್ರ ಹೆಸರನ್ನು ಹೇಳದೇ ಕುಮಾರಸ್ವಾಮಿ ಗುಡುಗಿದ್ದಾರೆ. ಕೆಲ ದಿನಗಳ ಹಿಂದೆ ಯತೀಂದ್ರ ವಿರುದ್ಧ ಕುಮಾರಸ್ವಾಮಿ ಟ್ವೀಟ್‌ನನ್ನೂ ಸಹ ಮಾಡಿದ್ದರು. ದೇಶದಲ್ಲಿ ಜಿಎಸ್‌ಟಿ ತೆರಿಗೆ ಇದೆ. ಆದ್ರೆ ಈ ಸರ್ಕಾರದಲ್ಲಿ ವೈಎಸ್‌ಟಿ ರೀತಿ ತೆರಿಗೆ ಶುರುವಾಗಿದೆ. ಈ ಬಗ್ಗೆ ಚರ್ಚೆ ಆಗಬೇಕು. ಜನ ಹೊರಗಡೆ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನು ಪತ್ತೆ ಹಚ್ಚಲು ಟ್ರೈ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಮಟ ಮಟ ಮಧ್ಯಾಹ್ನ ಒಂಟಿ ಮಹಿಳೆ ಕೊಲೆ: ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೊಲೆಗಾರ..!