Asianet Suvarna News Asianet Suvarna News

ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ಖೂಬಾ ಕಪ್ಪುಚುಕ್ಕೆ

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಯಾದಗಿರಿ, (ಆ.18): ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದು ಬಿಜೆಪಿ ಜನಾರ್ಶೀವಾದ ಯಾತ್ರೆಗೆ ಕಪ್ಪುಚುಕ್ಕೆಯಾಗಿದೆ.

Video Top Stories