ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ..ರೇವಣ್ಣ ಫ್ಯಾಮಿಲಿ ವಿರೋಧಿಸಿದ್ರೂ ಸ್ವರೂಪ್‌ಗೆ ಟಿಕೆಟ್‌..?

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಆದರು ಇನ್ನು ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದ ಜೆಡಿಎಸ್ ಟಿಕೆಟ್ ಫೈಟ್ ಮಾತ್ರ ಇನ್ನೂ ನಿಂತಿಲ್ಲ.ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಹಂಚಿಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಿದೆ. ಪಕ್ಷದ ಕಾರ್ಯಕರ್ತರಿಗೇ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು ಕಾರ್ಯಕರ್ತನಿಗೆ ಟಿಕೆಟ್‌ ಕೊಡೋದು ಅಂತ ಹೇಳಿದ್ದೇನೆ. ಅದರಲ್ಲಿ ಬದಲಾವಣೆ ಇಲ್ಲ. ಈಗಾಗಲೇ ತೀರ್ಮಾನ ಮಾಡಿಯಾಗಿದೆ. ಶಿಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವರೂಪ್‌ಗೆ ಟಿಕೆಟ್ ಘೋಷಣೆ ಎಂಬುದನ್ನು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video