ಬಿಎಸ್ವೈಗೆ ಆಪ್ತ ಸಹಾಯಕನಿಂದ ಶುಭಾಶಯ ಸಂದೇಶ ಕಳುಹಿಸಿದ ಎಚ್ಡಿಕೆ
ಬಿಎಸ್ವೈ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ಆದ್ರೆ, ಎಚ್ಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದ ಆಪ್ತ ಸಹಾಯಕನಿಂದ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು,(ಫೆ.27): ಇಂದು (ಗುರುವಾರ) ಸಿಎಂ ಯಡಿಯೂರಪ್ಪ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಬಿಎಸ್ವೈಗೆ ಶುಭಾಶಯ ತಿಳಿಸಿದ್ದಾರೆ.
ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಮೊಹಮ್ಮದ್ನ ಪ್ರೇಮದ ಕಾಣಿಕೆ!
ಇನ್ನು ಬಿಎಸ್ವೈ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ಆದ್ರೆ, ಎಚ್ಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದರಿಂದ ಆಪ್ತ ಸಹಾಯಕನಿಂದ ಸಂದೇಶ ರವಾನಿಸಿದ್ದಾರೆ.