Asianet Suvarna News Asianet Suvarna News

ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

 ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಬೆಂಗಳೂರು (ಅ. 01): ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಈ ವೇದಿಕೆಯಲ್ಲಿ ಜೆಡಿ​ಎಸ್‌ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾ​ನಿ​ಸಿ​ದರು. 

ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ.  ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.