Asianet Suvarna News Asianet Suvarna News

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಕೆ ಶಿವಕುಮಾರ್ ಹೆಗಲಿಗೆ ಹಾಕುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಆದ್ರೆ, ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ ರೂಪಿಸಿದ್ದಾರೆ. 

ಬೆಂಗಳೂರು, [ಜ.05]: ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಕೆ ಶಿವಕುಮಾರ್ ಹೆಗಲಿಗೆ ಹಾಕುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಆದ್ರೆ, ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ ರೂಪಿಸಿದ್ದಾರೆ. 

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ 

ಮೊದಲಿನಿಂದಲೂ ಡಿಕೆಶಿ ಹಾಗೂ ಸಿದ್ದು ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಗೊತ್ತಿರುವ ವಿಚಾರ. ಇದೀಗ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧರಿಸಿದ್ದು, ಇದಕ್ಕೆ ಸಿದ್ದು ಚೆಕ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು [ಭಾನುವಾರ] ಡಿಕೆಶಿ ದಿಢೀರ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಕಾವೇರಿ ನಿವಾಸದಲ್ಲಿ ಚರ್ಚೆ ಕಾವೇರಿದೆ.

 ಹಾಗಾದ್ರೆ ಡಿಕೆಶಿಯನ್ನು ಕಟ್ಟಿ ಹಾಕಲು ಸಿದ್ದು ಮಾಡಿರುವ ಪ್ಲಾನ್ ಏನು..? ಡಿಕೆಶಿ ದಿಢೀರ್ ಸಿದ್ದು ಭೇಟಿ ಮಾಡಿದ್ಯಾಕೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ..

Video Top Stories