Asianet Suvarna News Asianet Suvarna News

'ನಾವು ಬೆನ್ನಿಗೆ ಚೂರಿ ಹಾಕಿಲ್ಲ, ಅವರೇ ಎದೆಗೆ ಚಾಕು ಹಾಕಿದ್ರು'

ಅನರ್ಹ ಶಾಸಕ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅವರು ತಿರುಗಿಬಿದ್ದಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿ.ಸಿ. ಪಾಟೀಲ್, ಸಿದ್ದರಾಮಯ್ಯ ನಮ್ಮ ಎದೆಗೆ ಚಾಕು ಹಾಕಿದ್ದಾರೆ ಎಂದು ಆರೋಪಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿದ್ದರೂ ಯಾವುದೇ ಸ್ಥಾನ ನೀಡದೇ ದ್ರೋಹ ಮಾಡಿದರು ಎಂದು ನೋವನ್ನು ತೋಡಿಕೊಂಡರು.

ಹಾವೇರಿ (ನ.28): ಅನರ್ಹ ಶಾಸಕ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅವರು ತಿರುಗಿಬಿದ್ದಿದ್ದಾರೆ. 

ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿ.ಸಿ. ಪಾಟೀಲ್, ಸಿದ್ದರಾಮಯ್ಯ ನಮ್ಮ ಎದೆಗೆ ಚಾಕು ಹಾಕಿದ್ದಾರೆ ಎಂದು ಆರೋಪಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿದ್ದರೂ ಯಾವುದೇ ಸ್ಥಾನ ನೀಡದೇ ದ್ರೋಹ ಮಾಡಿದರು ಎಂದು ನೋವನ್ನು ತೋಡಿಕೊಂಡರು.

ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ವಿಧಾನಸಭಾ ಕ್ಷೇತ್ರಗಳಿಗೆ  ಡಿ.5ರಂದು ಉಪಚುನಾವಣೆ ನಡೆಯಲಿದೆ. ಡಿ.09ರಂದು ಫಲಿತಾಂಶ ಪ್ರಕಟವಾಗಲಿದೆ.

Video Top Stories