
ಮೈಸೂರು: ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಹೋಳಿಗೆ ಊಟ !
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನೆಲೆ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ಊಟ ಹಾಕಲಾಗಿದೆ.
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನೆಲೆ ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ವಿತರಣೆ ಮಾಡಲಾಗಿದೆ. ಮೈಸೂರು ಅರಮನೆ ಬಳಿಯ ಇಂದಿರಾ ಕ್ಯಾಂಟೀನ್ನಲ್ಲಿ ಹೊಳಿಗೆ ಊಟ ಹಾಕಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಎಂಬುವವರು ಹೋಳಿಗೆ ಊಟ ಹಾಕಿಸಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದು, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಆಗಿದ್ದಾರೆ. ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯ ಅವರ ಕನಸಿನ ಕೂಸಾಗಿದೆ. ಇಬ್ಬರು ನಾಯಕರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವುದರಿಂದ ಹೊಳಿಗೆ ಊಟ ಹಾಕಿಸಿದ್ದೇವೆ ಎಂದು ಬ್ಯಾಂಕ್ ಬಸಪ್ಪ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ: ಡಿ.ಕೆ.ಶಿವಕುಮಾರ್