ರಾಸಲೀಲೆ CD: ಜಾರಕಿಹೊಳಿ ಸುಳಿವು ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಸಿಎಂ
ಬಾಂಬೆಯಲ್ಲಾ..ಬೆಂಗಳೂರಿನಲ್ಲೇ ಈ ಷಡ್ಯಂತ್ರ ನಡೆದಿದೆ ಎಂದು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ.
ಬೆಂಗಳೂರು, (ಮಾ.09): ಮಹಿಳೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿರುವ ಆರೋಪ ಹಾಗೂ ಸಿ.ಡಿ ವಿವಾದದ ಹಿನ್ನೆಲೆ ರಮೇಶ್ ಜಾರಕಿಹೊಳಿ ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದರು.
ರಾಸಲೀಲೆ CD: ಸ್ಫೋಟಕ ಸುಳಿವು ಕೊಟ್ಟ ರಮೇಶ್ ಜಾರಕಿಹೊಳಿ
ಈ ವೇಳೆ ನನ್ನ ವಿರುದ್ಧ ನಡೆದ ಷಡ್ಯಂತ್ರದ ಹಿಂದೆ ಒಬ್ಬರು ಮಹಾನಾಯಕರಿದ್ದಾರೆ. ಬಾಂಬೆಯಲ್ಲಾ..ಬೆಂಗಳೂರಿನಲ್ಲೇ ಈ ಷಡ್ಯಂತ್ರ ನಡೆದಿದೆ ಎಂದು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ.