Asianet Suvarna News Asianet Suvarna News

ಶಿರಾ ಬೈ ಎಲೆಕ್ಷನ್: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಒಳ ಜಗಳ ಬಯಲು

ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. 

ತುಮಕೂರು, (ಅ.08): ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ನಡೆದಿರುವ ಈ ಸಂಭಾಷಣೆ ಇದೀಗ ಇದಕ್ಕೆ ಪುಷ್ಟಿ ನೀಡಿದೆ.

ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎಂದು ವರಿಷ್ಠರ ಸೂಚನೆ ಬಗ್ಗೆ ಡಿ.ಕೆ ಶಿವಕುಮಾರ್ ಬಾಯಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆ ವೇಳೆ ಅವರ ಕಿವಿಯಲ್ಲಿ ಶಿವಕುಮಾರ್​ ಹೇಳಿದ್ದಾರೆ.