
ಬಿಎಸ್ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!
* ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ?
* ಬಿಎಸ್ವೈ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ಎಂದ ಎಚ್ಡಿಕೆ
* ವಿಜಯೇಂದ್ರ ಹಿಡಿದುಟ್ಟುಕೊಳ್ಳಲು ಪ್ಲಾನ್
* ಮುಂದಿನ ಚುನಾವಣೆ ಗುರಿಯಾಗಿರಿಸಿಕೊಂಡು ತಂತ್ರ
ವಿಜಯಪುರ(ಅ. 07) ಬಿಎಸ್ ಯಡಿಯೂರಪ್ಪ(BS Yediyurappa) ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅವರ ಕುಟುಂಬದ ಆಪ್ತರ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಬಾಂಬ್ ಸಿಡಿಸಿದ್ದಾರೆ.
Add Asianetnews Kannada as a Preferred Source

ಬಿಜೆಪಿಯವರು ಬಿಎಸ್ ವೈ ಮೇಲೆ ನಿಯಂತ್ರಣ ಸಾಧಿಸಲು ನಡೆದ ದಾಳಿ ಇದಾಗಿದೆ. ಮುಂದಿನ ದಿನಗಳಲ್ಲಿ ಹಿಡಿದು ಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಸಿಡಿಸಿರುವ ಬಾಂಬ್ ಬಿಜೆಪಿಯಲ್ಲಿಯೂ ಚರ್ಚೆ ಹುಟ್ಟಿಸಿದೆ.