ಜೆಡಿಎಸ್ ಮಿಷನ್-123: ಚುನಾವಣೆಗೂ ವರ್ಷದ ಮೊದಲೇ ಅಭ್ಯರ್ಥಿ ಘೋಷಣೆ
ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಾಲ್ಕು ದಿನಗಳ ಕಾಲ ಜೆಡಿಎಸ್ ಮಿಷನ್-123 ಕಾರ್ಯಾಗಾರ ಆಯೋಜಿಸಲಾಗಿದೆ.
ಬೆಂಗಳೂರು (ಸೆ. 27): ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಾಲ್ಕು ದಿನಗಳ ಕಾಲ ಜೆಡಿಎಸ್ ಮಿಷನ್-123 ಕಾರ್ಯಾಗಾರ ಆಯೋಜಿಸಲಾಗಿದೆ.
ಹೈಕಮಾಂಡ್ನಿಂದ ದಲಿತ ಕಾರ್ಡ್, ತಣ್ಣಗಾಯ್ತಾ ಸಿದ್ದು-ಡಿಕೆಶಿ ನಡುವಿನ ಜಿದ್ದಾಜಿದ್ದಿ.?
ಈ ಕಾರ್ಯಾಗಾರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 123 ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು. ಹಾಲಿ ಮತ್ತು ಮಾಜಿ ಶಾಸಕರು, ಕಳೆದ ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಹಾಗೂ ಮುಂದಿನ ಚುನಾವಣೆಯ ಆಕಾಂಕ್ಷಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು. ವಿವಿಧ ಕ್ಷೇತ್ರಗಳ 123 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ ಅವರಿಗೆಲ್ಲ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಎಚ್ಡಿಕೆ ಹೇಳಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಹಿರಿಯ ನಾಯಕ ವೈ.ಎಸ್ .ವಿ.ದತ್ತಾ, ಸಂಸದ ಪ್ರಜ್ವಲ್ ರೇವಣ್ಣ , ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ರಾಜ್ಯದ ಎಲ್ಲಾ ಕ್ಷೇತ್ರದ ಜಿಲ್ಲಾಧ್ಯಕ್ಷರು, ಪ್ರಮುಖ ಮುಖಂಡರು ಕಾರಾರಯಗಾರದಲ್ಲಿ ಭಾಗಿಯಾಗಲಿದ್ದಾರೆ.