Asianet Suvarna News Asianet Suvarna News

ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು

ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ತಲುಪಿದ್ದು, ಕೋಲಾರದಲ್ಲಿ ಯಾತ್ರೆಗೆ  ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

ಕೋಲಾರ: ಕೋಲಾರದಲ್ಲಿ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ಮುಂದುವರೆದಿದ್ದು, ಈ ಕುರಿತು ಕುಮಾರಸ್ವಾಮಿ ಮಾತನಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡುವಳಿಕೆ ಬಗ್ಗೆ ಜನರಿಗೆ ಬೇಸರವಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಅವರು ಹೇಳಿದರು. ಪಂಚರತ್ನ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ಪರಿಹಾರ ಸಿಗಲಿದೆ. ಪಂಚರತ್ನ ಯಾತ್ರೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪಂಚರತ್ನ ಯಾತ್ರೆ ಯಶಸ್ಸು ಕಂಡು ಕೆಲವರಿಗೆ ತಳಮಳ  ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ  ಹೆಚ್ ಡಿ ಕೆ ಕಿಡಿ ಕಾರಿದ್ದಾರೆ.

Video Top Stories