Asianet Suvarna News Asianet Suvarna News

ಇಂದು ಮೈಸೂರಿನಲ್ಲಿ ಪಂಚರತ್ನ ಸಮಾರೋಪ: ಶಕ್ತಿ ಪ್ರದರ್ಶಕ್ಕೆ ಜೆಡಿಎಸ್‌ ಸಜ್ಜು

 ಜೆಡಿಎಸ್‍ನ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶವು ಇಂದು ಮೈಸೂರಿನಲ್ಲಿ ನಡೆಯಲಿದ್ದು, 10 ಲಕ್ಷ ಕಾರ್ಯಕರ್ತರು ಅಭಿಮಾನಿಗಳು ಸೇರುವ ಸಾಧ್ಯತೆ ಇದೆ.

 ಜೆಡಿಎಸ್‍ನ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶವು ಇಂದು ಮೈಸೂರಿನಲ್ಲಿ ನಡೆಯಲಿದ್ದು, 10 ಲಕ್ಷ ಕಾರ್ಯಕರ್ತರು ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಜಿ. ಟಿ ದೇವೇಗೌಡರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, 6 ತಿಂಗಳ ಬಳಿಕ ಕಾರ್ಯಕ್ರಮವೊಂದರಲ್ಲಿ ಎಚ್‌ಡಿಡಿ ಭಾಗಿಯಾಗಲಿದ್ದಾರೆ.  ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ ಪಕ್ಕದ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,  ಸಮಾವೇಶಕ್ಕೂ ಮುನ್ನ ಶ್ರೀರಾಂಪುರದಿಂದ ರೋಡ್ ಷೋ ಮಾಡಲಾಗುತ್ತದೆ. ಇನ್ನು ಸಂಜೆ ನಾಲ್ಕು ಗಂಟೆಗೆ ಸಮಾವೇಶ ಜರುಗಲಿದೆ.
 

Video Top Stories