ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ
ನ್ಯೂಸ್ ಅವರ್ ಸ್ಪೇಷಲ್ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉತ್ತರಿಸಿದ್ದಾರೆ.
ಬೆಂಗಳೂರು (ಮೇ 15): ನ್ಯೂಸ್ ಅವರ್ ಸ್ಪೇಷಲ್ನಲ್ಲಿ (News Hour Special) ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಉತ್ತರಿಸಿದ್ದಾರೆ. ಖಂಡತುಂಡವಾಗಿ ಮಾತನಾಡುವ ಈಶ್ವರಪ್ಪ ಮಾತು ಪ್ರತಿ ಬಾರಿಯೂ ಮಾಧ್ಯಮಗಳಲ್ಲಿ ಹೆಡ್ಲೈನ್ ಆಗುತ್ತದೆ. ಪಕ್ಷದ ಸಿದ್ಧಾಂತಗಳನ್ನು ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುವ ಜಾಯಮಾನದವರಲ್ಲ ಈಶ್ವರಪ್ಪ. ಹೀಗಾಗಿಯೇ ಅವರ ಸುತ್ತಮುತ್ತ ಹತ್ತು ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈ ನಡುವೆ ಈಶ್ವರಪ್ಪರನ್ನ ಸುತ್ತಿಕೊಂಡ ಮತ್ತೊಂದು ವಿವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ. ಇವೆಲ್ಲದರ ಬಗ್ಗೆ ನ್ಯೂಸ್ ಅವರ್ ಸ್ಪೆಷಲ್ನಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ, ನೇರ ಪ್ರಶ್ನೆಗಳಿಗೆ ನೇರಾ ನೇರ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ