Asianet Suvarna News Asianet Suvarna News

'ಕಲ್ಯಾಣ ಕರ್ನಾಟಕದ ನಾಯಕರು ಸಂಪರ್ಕದಲ್ಲಿದ್ದಾರೆ, ಒಳ್ಳೆಯ ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ'

ಹಲವು ಪಕ್ಷದ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ, ಒಳ್ಳೆಯ ಮುಹೂರ್ತಕ್ಕಾಗಿ ಅವರು ಕಾಯುತ್ತಿದ್ದಾರೆ ಎಂದು ಸಿ ಟಿ ರವಿ ಹೇಳಿದ್ದಾರೆ

ಕಲಬುರಗಿ (ಮೇ 16):  ಕಲ್ಯಾಣ ಕರ್ನಾಟಕದ ನಾಯಕರು ಸಂಪರ್ಕದಲ್ಲಿದ್ದಾರೆ,ಒಳ್ಳೆಯ ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ( C T Ravi) ಹೇಳಿದ್ದಾರೆ. ಹಲವು ಪಕ್ಷದ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ, ಒಳ್ಳೆಯ ಮುಹೂರ್ತಕ್ಕಾಗಿ ಅವರು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಭರದ ಸಿದ್ಧತೆ ನಡೆಸಿದ್ದು, ರಾಜಕೀಯ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಪ್ಲಾನ್‌ ಮಾಡಿಕೊಂಡಿದೆ. ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಕೇಸರಿ ಪಾಲಯ ಮುಂದಾಗಿದೆ.  ಈ ನಡುವೆ ಸಿ ಟಿ ರವಿ ಹೇಳಿಕೆ ಮತ್ತಷ್ಟು ಕುತೂಹಲ ಮೂಡಿಸಿದೆ. 

ಇದನ್ನೂ ಓದಿ: ಗಲಭೆಕೋರರ ನಾಲ್ಕೈದು ತಲೆ ಉರುಳಿದ್ದರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು: ಸಿ. ಟಿ. ರವಿ

Video Top Stories