Asianet Suvarna News Asianet Suvarna News

ಅಥಣಿ ಕ್ಷೇತ್ರದ ಜನರ ಪ್ರೀತಿಗೆ ಸದಾ ಋಣಿ: ಲಕ್ಷ್ಮಣ ಸವದಿ

ರಾಜ್ಯದ ಗಮನ ಸೆಳೆದಿದ್ದ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.  55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ. 

ರಾಜ್ಯದ ಗಮನ ಸೆಳೆದಿದ್ದ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.  55,144 ಮತಗಳನ್ನ ಪಡೆಯವ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ.   ಈ ಸಂದರ್ಭದಲ್ಲಿ ಸ್ವರೂಪ್   ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು, ಅಥಣಿ ಕ್ಷೇತ್ರದ ಜನರ ಪ್ರೀತಿಗೆ ಸದಾ ಋಣಿ , ಅವರು ಕೊಟ್ಟ ಗೆಲುವಿಗೆ  ಜೀವನವಿಡಿ  ಅವರ ಸೇವೆ ಮಾಡಿದರು ಸಾಲದು ಎಂದು ಹೇಳಿದರು. ಹಾಗೇ ರಮೇಶ್ ಜಾರಕಿಹೊಳಿಗೆ ಮತದಾರರು ತಕ್ಕ ಉತ್ತರವನ್ನು ಕೊಟ್ಟಿದ್ದಾರೆ. ಹೀಗಾಗಿ ಇನ್ನಾದರು ಅವರು ತಮ್ಮ ನಾಲಿಗೆಯನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಇನ್ನು ಮಂತ್ರಿ ಬಗ್ಗೆ ಆಗಲಿ ಸ್ಥಾನದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕ್ಷೇತ್ರದಲ್ಲಿ ಗೆದ್ದಿದ್ದೇನೆ, ಜನರ ಸೇವೆ ಮಾಡುತ್ತೇನೆ ಎಂದು ಅಭಿಪ್ರಾಯ ಪಟ್ಟರು. ಇನ್ನು ಸಿದ್ದರಾಮಯ್ಯರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು     
 

Video Top Stories