ಸಿಂ'ಹಾಸನ' ಅಖಾಡಕ್ಕೆ ಭವಾನಿ ರೇವಣ್ಣ ಎಂಟ್ರಿ: ಟಿಕೆಟ್ ಫೈನಲ್'ಗೂ ಮುನ್ನ ಭರ್ಜರಿ ಪ್ರಚಾರ
ವಿಧಾನಸಭಾ ಚುನಾವಣಾ ಅಖಾಡಕ್ಕೆ ಭವಾನಿ ರೇವಣ್ಣ ಎಂಟ್ರಿ ಕೊಟ್ಟಿದ್ದು, ಟಿಕೆಟ್ ಫೈನಲ್ ಆಗುವ ಮುನ್ನವೇ ಹಾಸನ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಹಾಸನ ಜೆಡಿಎಸ್ ಟಿಕೆಟ್ ಫೈಟ್ ನಡುವೆಯೂ, ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ರೇವಣ್ಣ ದಂಪತಿ ಕ್ಯಾಂಪೇನ್ ಶುರುಮಾಡಿದ್ದಾರೆ. ದೊಡ್ಡಪುರ ರಾಮೇಶ್ವರ ದೇಗುಲದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಭವಾನಿ ರೇವಣ್ಣ ಹಾಸನ ಕ್ಷೇತ್ರದ ಮುಂದಿನ ಎಂಎಲ್ಎ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಪೋಸ್ಟ್ ಹಾಕಲಾಗಿದೆ.