
ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ: ಪ್ರೀತಂ ಗೌಡಗೆ ಟಕ್ಕರ್?
ಹಾಸನವು ಹೈವೋಲ್ಟೇಜ್ ಕ್ಷೇತ್ರ ಆಗಲಿದ್ದು, ಗೌಡರ ಕುಟುಂಬದಿಂದ ಮತ್ತೊಬ್ಬರು ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ಖಚಿತವಾಗಿದ್ದು, ಸ್ಪರ್ಧೆ ಬಗ್ಗೆ ಖುದ್ದು ಅವರೇ ಹೇಳಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ನನ್ನ ಹೆಸರು ಹೇಳ್ತಾರೆ, ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ನನ್ನ ಹೆಸರನ್ನು ಅಧಿಕೃತವಾಗಿ ಘೋಷಿಸುತ್ತಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ