
ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ನಾನಾ ಕಸರತ್ತು ನಡೆಸಿದ್ದು, ಅಮಿತ್ ಶಾ ಭೇಟಿಯಿಂದ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿದೆ.
ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಭೇಟಿ ನೀಡಿದ್ದು, ಮತ್ತೊಮ್ಮೆ ಕಮಲ ಅರಳಿಸಲು ಪ್ಲಾನ್ ನಡೆಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಸಭೆಯಲ್ಲಿ ನಾಯಕರಿಗೆ ಏನು ಸೂಚನೆ ಕೊಟ್ಟಿಲ್ಲ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ. ಕಾರ್ಯಕ್ರಮದ ಮೂಲಕ ನಾವು ಚುನಾವಣೆಗೆ ಹೋಗ್ತೆವೆ ಎಂದು ತಿಳಿಸಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
Add Asianetnews Kannada as a Preferred Source

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್' ಕಂಪನ ನಡುವೆ ಟೆಂ ...