ಬೆದರಿಕೆ ಹಾಕುವವರಿಗೆ ತಲೆ ಬಾಗಲ್ಲ, ಸ್ವರೂಪ್ ಪರ ಮಾಜಿ ಸಿಎಂ ಎಚ್ಡಿಕೆ ಬ್ಯಾಟಿಂಗ್..!
ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಕಳೆದು ಒಂದು ವರ್ಷದಿಂದ ಏನು ಹೇಳಿದ್ದೇನೆಯೋ ಸ್ವರೂಪ್ಗೆ ಟಿಕೆಟ್ ಎಂದು ಈಗಲೂ ಅದೇ ನನ್ನ ನಿಲುವು. ಈ ಕುರಿತಂತೆ ಬೆದರಿಕೆ ಹಾಕುವವರಿಗೆ ತಲೆ ಬಾಗುವುದಿಲ್ಲ ಎಂದು ತಿಳಿಸಿದ್ದಾರೆ. ಬರುವ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಬೇಕು, ಅದೇ ನಮ್ಮ ಗುರಿ. ಜನ ಮತ್ತು ಕಾರ್ಯಕರ್ತರಿಗೆ ವಿಶ್ವಾಸ ಮೂಡಿಸಬೇಕಾಗಿದೆ.ಇನ್ನು ಹಾಸನದಲ್ಲಿ ಭವಾನಿ ಭಾವಚಿತ್ರ ವಿಚಾರವು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ರೇವಣ್ಣಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು